Skip to main content

ಇಬ್ಬನಿ ಕರಗುವ ಮುನ್ನ...


ಆಸೆ-ಹತಾಶೆಗಳ ನಡುವಿನ ಜೀವನ ಅದೆಷ್ಟೋ ಪಾಠ ಕಲಿಸುತ್ತದೆ.ಕಾಡುವ ನೋವಿಗೆ ಸಾಂತ್ವನ ಸಿಗದೇ ವಿವಿಲನೆ ಒದ್ದಾಡುವ ಸನ್ನಿವೇಶವೂ ಉಂಟಾಗುತ್ತದೆ.ಸುಖ-ದುಃಖದ ಆಟದ ನಡುವೆ ಎಲ್ಲೋ ಜಿನುಗುವ ಮನಃ ಶಾಂತಿ ಇನ್ನೇನೋ ಮಾಡಲು ಪ್ರೇರೇಪಿಸುತ್ತದೆ.ಇಬ್ಬನಿಗಳ ಸಾಲಿನಂತೆ ಚಿಗುರೋದೇವ ಮನಸ್ಸು ಆಕ್ರಮಣಕಾರಿಯಾಗಿ
ಬಿಡುತ್ತದೆ.ಬದುಕು ಚರ ವಸ್ತುವೆಂದು ಅನಿಸುವುದೇ ಇಲ್ಲ.ನೋಡುಗರ ಕಣ್ಣಿಗೆ ಹಬ್ಬವಾಗಿ ಕಾಣುವ ಹೊತ್ತಿಗೆ ಕಲ ಸರಿದಿರುತ್ತದೆ.ಭಗ್ನ ಕನಸುಗಳು ದೊಂದಿ ಹಿಡಿದು ನಿಂತಿರುತ್ತವೆ.ಯಾವುದರ ಪರಿವೆಯೂ ಇಲ್ಲದಂತೆ ದೇಹ ನೀರವ ಮೌನಕ್ಕೆ ಜಾರುತ್ತದೆ.ಆ ಹೊತ್ತಿನ ಭಾವೋದ್ವೇಗ ಜನ ಮಾನದ ಮರೆಯದಂತೆ ಮಾಡುತ್ತದೆ,ಭಾವನೆಗಳ ಅರ್ಥದ ಸಾಕ್ಷಾತ್ಕಾರವಾಗುತ್ತದೆ.ಇಬ್ಬನಿ ಕರಗುವ ಮುನ್ನ, ಉಸಿರು ನಿಲ್ಲುವ ಮುನ್ನ ಉಂಟಾಗುವ ಭೀತಿ ಒಂದೇ ಅಲ್ಲವೇ...?



Comments

Popular posts from this blog

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

ಜಾತಿರಾಜಕಾರಣ ಯಾಕೆ ಬೇಕು..?

      ನ ಮ್ಮದು ಜ್ಯಾತ್ಯಾತೀತ ದೇಶ.ಹೀಗೆಂದು ಹೇಳಿಕೊಳ್ಳುವವರಿಗೆ ಲೆಕ್ಕವಿಲ್ಲ.ಆದರೂ,ಅನೇಕ ರೀತಿ-ರಿವಾಜು,ಜಾತಿ-ಧರ್ಮಗಳನ್ನು ಹೊಂದಿರುವ ದೇಶದಲ್ಲಿ ಸಾಮರಸ್ಯ ಕಾಣಬೇಕಾದರೆ ಜ್ಯಾತ್ಯಾತೀತತೆಯ ಕಡೆ ಒಲವು ಮೂಡಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ.ಸರಳ ನಡೆ-ನುಡಿ,ತಾತ್ವಿಕ ವಿಚಾರಗಳ ಕುರಿತ ಚರ್ಚೆ,ಸಹೋದರತೆಯನ್ನು ಸಾರುವ ಗುಣಗಳನ್ನು ಬೆಳೆಸಿಕೊಳ್ಳುವ ರೂಢಿ ಮಾಡಿಕೊಳ್ಳಬೇಕಿದೆ.ಜನರ ನಡುವೆ ಒಮ್ಮತದ ನಿರ್ಧಾರ ಕೈಗೊಳ್ಳಲು ಪ್ರಯತ್ನಗಳು ಸಾಗಬೇಕಿವೆ.ದಿನೇ-ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಲ್ಲಿ ಕೆಲವೊಂದು ಜಾತಿ-ಧರ್ಮಕ್ಕೆ ಸೇರಿದವರ ಸಂಖ್ಯೆ ಜಾಸ್ತಿಯಿರಬಹುದು.ಇದರಿಂದ ಸಾಮಾಜಿಕ ಬದಲಾವಣೆಗಳು ಸಾಧ್ಯ.ಹೀಗಾಗಿ ಸಮತೋಲನ ಕಾಯ್ದುಕೊಳ್ಳುವ ಜವಾಬ್ದಾರಿ ಮತ್ತೆ ಜನರದೇ ಆಗಿರುತ್ತದೆ.ಆದರೆ ಇದೆಲ್ಲಕ್ಕೂ ಸಂವಿಧಾನತ್ಮಕ ರೂಪು-ರೇಷೆಗಳಿರುತ್ತವೆ.ಮತದಾನದ ಮೂಲಕ ಆಯ್ಕೆಯಾಗಿರುವ ವ್ಯಕ್ತಿ ಊರಿನ ಪ್ರತಿನಿಧಿಯಾಗಿರುತ್ತಾನೆ.ರಾಜಕೀಯ ಪಕ್ಷಗಳು ಮೊದಲ ಹಂತದಲ್ಲಿ ಜನರನ್ನು ವಿಭಾಗಿಸಿಬಿಡುತ್ತದೆ.ಇಲ್ಲಿ ನಡೆಯುವ ಎಲ್ಲಾ ಲೆಕ್ಕಾಚಾರಗಳು ಜನರ ಹಿತದೃಷ್ಠಿಯಿಂದ ಎಂಬ ಮುಖವಾಡ ಹೊತ್ತಿರುತ್ತದೆಯಲ್ಲದೆ ಅಸಲಿ ಅಂಶ ಬೇರೆಯದೇ ಆಗಿರುತ್ತದೆ.          ರಾಜಕೀಯಕ್ಕೂ ಜಾತಿ-ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ.ಆದರೆ ಇಂದು ನಡೆಯುತ್ತಿರುವುದೆಲ್ಲ ಜಾತಿ ರಾಜಕಾರಣವೆ.ಇದರ ಬೇರು ವಿಶಾಲವಾಗಿ ಹರಡಿ ನಿಂತಿದೆ.ಮತದಾರರನ್ನು ವಿ...

-: ಮುತ್ತಿನ ಹನಿಗಳು :-

------೧------ ಚುಂ- ಬನಕ್ಕೆ ಲಗ್ಗೆಯಿಡುವ ಯುವ ಜೋಡಿಗಳು ಅದೆಂತಹ ಪ್ರಕೃತಿ ಆರಾಧಕರು..! ------೨------ ಹೂದೋಟದಲ್ಲಿ ಕಾಣದ ಪತಂಗಗಳು ಯಥೇಚ್ಛ ಮಧು ಸವಿಯಲು ಯುವತಿಯರ ಹಿಂದೆ ಬಿದ್ದಿವೆಯಂತೆ..!