ಬ್ರಿಟೀಷರ ಸಂಕೋಲೆಯಿಂದ ಬಂಧ-ಮುಕ್ತವಾದ ನಂತರ ನಮ್ಮ ದೇಶ ಅನೇಕ ಚಳುವಳಿಗೆ ಸಾಕ್ಷಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ಅವಕಾಶವೂ ಇದೆ. ಜನರ ನಸುವಿನ ಸಮಸ್ಯೆಗಳು ಪರಿಹಾರ ಕಂಡುಕೊಳ್ಳದೆ ಇದ್ದಾಗ, ಉಗ್ರ ರೂಪಕ್ಕೆ ಪರಿವರ್ತನೆಗೊಂಡು ಸತ್ಯಾಗ್ರಹ-ಹರತಾಳ-ಆಂದೋಲನದ ಹಾದಿ ತುಳಿಯುತ್ತದೆ.ತಾವೇ ಆರಿಸಿ,ಆಡಳಿತ ನಡೆಸುವ ಅವಕಾಶ ಕೊಟ್ಟೀರುವಗ,ಬಗೆಹರಿಯದ ಸಮಸ್ಯೆಗಳಿಗೆ ಉತ್ತರ ಹುಡುಕುವ ಗೋಜಿಗೆ ಹೋಗದ ಮಂತ್ರಿ ಮಹೋದಯರಿಗೆ ಹಿಡಿ ಶಾಪ ಹಾಕದೆ ಇರುವರೇ..? ಜನ ಲೋಕಪಾಲ ಮಸೂದೆ ಜಾರಿಯಲ್ಲೂ ಅದೇ ರಾಗ-ತಾಳ.
ಇಡೀ ದೇಶವೇ ಮಸೂದೆ ಜಾರಿಯಗಲೆಂದು ಟೊಂಕ ಕಟ್ಟೀ ನಿಂತಿದೆ. ಇದರಿಂದ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವೆನ್ನುವುದು ಜನಾಭಿಪ್ರಾಯ.ಈ ಚಳುವಳಿಯ ನಾಯಕತ್ವ ವಹಿಸಿರುವ ಸಮಾಜ ಸೇವಕ ಅಣ್ಣಾ ಹಜಾರೆ, ದೇಶ ಅತಿ ಗೌರವದಿಂದ ಕಾಣುತ್ತಿರುವ ಗಾಂಧೀವಾದಿ.ಅಬಾಲ-ವೃದ್ಧರೆನ್ನದೆ ಚಳುವಳಿಯಲ್ಲಿ ಪಾಲ್ಗೊಳುತ್ತಿರುವ ಜನರಿಂದಾಗಿ ಕೇಂದ್ರ ಸರಕಾರ ತಲೆ ತಗ್ಗಿಸುವಂತಾಗಿದೆ. ಈ ಚಳುವಳಿ ಸಫಲವಾದಲ್ಲಿ, ಅತೀ ದೊಡ್ಡ ಪ್ರಜಾತಂತ್ರ ದೇಶವೆಂದು ಮತ್ತೆ ಸಾಬೀತುಪಡಿಸಿದಂತಾಗುತ್ತದೆ. ದೇಶದ ಹಿತಕ್ಕಾಗಿ ದುಡಿಯುತ್ತಿರುವ ಅಸಂಖ್ಯ ಜನರಿಗೆ ಅಭಿನಂದನೆ ಸಲ್ಲಿಸಲೇ ಬೇಕು.
ಧೂ ಮಪಾನ, ಮದ್ಯಪಾನದಂತೆ ಮಾದಕ ದ್ರವ್ಯ ಸೇವನೆಯ ಚಟ ಹೊಸ ತಲೆಮಾರಿನ ಯುವಕ/ಯುವತಿಯರಲ್ಲಿ ವಿದೇಶಿ ಮೋಹದಂತೆ ಸದ್ದಿಲ್ಲದೆ ಹರಡುತ್ತಿದೆ. ಷೋಕಿಗಾಗಿ, ದೈಹಿಕ ಮತ್ತು ಮಾನಸಿಕ ನೋವಿನಿಂದ ಕೆಲ ಕ್ಷಣ ದೂರವಾಗಲು ಇದರ ಬಳಕೆಯಾಗುತ್ತಿದೆ. ಇದಕ್ಕೆ ದಾಸರಾಗುವವರಲ್ಲಿ ಹೆಚ್ಚಿನವರು 18 ರಿಂದ 30 ವರ್ಷದೊಳಗಿನವರು. ಜಗತ್ತಿನೆಲ್ಲೆಡೆ ಸುಮಾರು 500 ಬಿಲಿಯನ್ ಮೊತ್ತದ ಮಾದಕ ವಸ್ತುಗಳ ವಹಿವಾಟು ನಡೆಯುತ್ತದೆ. ಪೆಟ್ರೋಲಿಯಂ ಮತ್ತು ಶಸ್ತ್ರಾಸ್ತ್ರ ಉದ್ದಿಮೆಯ ನಂತರದ ಸ್ಥಾನ ದಕ್ಕಿದೆ! ಪ್ರತಿಷ್ಠೆ ಎಂದುಕೊಂಡಿರುವ ಯುವ ಜನಾಂಗದ ಮೊಂಡುತನ, ಸಾವಿನ ಬಾಗಿಲು ತಟ್ಟುವಂತೆಯೂ ಮಾಡಿದೆ. ದೇಶದಲ್ಲಿ ಸುಮಾರು ಒಂದು ಕೋಟಿ ಹೆರಾಯಿನ್ ವ್ಯಸನಿಗಳಿದ್ದಾರೆ. ಕೆಲ ತಿಂಗಳ ಹಿಂದೆ, ಮಂಗಳೂರಿನ ವಿದ್ಯಾರ್ಥಿನಿಯೋರ್ವಳು ಈ ದುಷ್ಚಟಕ್ಕೆ ಬಲಿಯಾದ ಘಟನೆ ನಮ್ಮ ಮುಂದಿದೆ. ನೆರೆಯ ಪಾಕಿಸ್ತಾನದಿಂದ ಇದರ ವ್ಯವಸ್ಥಿತ ಸರಬರಾಜು ನಡೆಯುತ್ತಿದೆ ಎಂಬ ಗುಮಾನಿಯೂ ಇದೆ. ಅದರಲ್ಲೂ ಕರಾವಳಿ ಪ್ರದೇಶ ವಾಮಮಾರ್ಗ ಕರುಣಿಸಿ ಡ್ರಗ್ ಮಾಫಿಯಾಕ್ಕೆ ತೆರೆದುಕೊಂಡಿದೆ. ಹಾಗಿದ್ದರೆ, ಡ್ರಗ್ಸ್ ಅಥವಾ ಮಾದಕ ವಸ್ತುಗಳ ಕುರಿತಾದ ಪಕ್ಷಿ ನೋಟ ಇಲ್ಲಿದೆ. ಮಾನಸಿಕ ಮತ್ತು ದೈಹಿಕ ಬದಲಾವಣೆಗೆ ಕಾರಣವಾಗುವ ವಸ್ತುಗಳಿಗೆ ಮಾದಕ ವಸ್ತು ಎನ್ನಲಾಗುತ್ತದೆ. ಇದು ಘನ, ದ್ರವ ಅಥವಾ ಅನಿಲ ರೂಪದಲ್ಲಿರುತ್ತದೆ. ವ್ಯಕ್ತಿಯ ನರಮಂಡಲದ ಮೇಲೆ ಪ್ರಭಾವ ಬೀರುವ ಮೂರು ಮುಖ್ಯ ಮಾದಕ ವಸ್ತುಗಳ ವಿಧಗಳು: ಡಿಪ...
Comments