Skip to main content

ನಿರಪರಾಧಿ


ಅವರಿವರ ನಡುವಿನ
ಹೊಯ್ದಾಟಗಳು ಮರೆಮಾಡಿವೆ
ಮೌನ-ಧ್ಯಾನದ ನೆನಪನ್ನು
ಕತ್ತಲೆಯ ಗುಂಗಿನಲಿ
ನಾಳೆಯೆಂಬುವುದು
ಮಾಯವಾದಂತೆ

ದ್ವೇಷ-ವೈಷಮ್ಯಗಳ
ಪ್ರತಿಕಾರ ತೆರೆದಿದೆ
ರಕ್ತ ಕಾರುವ ಕಣ್ಣುಗಳ
ಬಯಲಿನಂಗಳದಲಿ
ನೀರಸೆಲೆಯಿಲ್ಲದೆ
ಹಸಿರು ಹರಡಿದಂತೆ

ತುದಿ ಮೊದಲಿಲ್ಲದೆ
ನರ-ನರಗಳಲ್ಲಿ
ಸಂಚಲಿತ ಯುದ್ಢ
ಮರವನ್ನಾವರಿಸಿ
ಸಾಯಿಸಲು ಹೊರಟ
ಬೀಳು-ಬಳ್ಳಿಯಂತೆ

ಆದರೂ,ಅವರಿವರು
ನಾವುಗಳ್ಳೆಲ್ಲಾ
ನಿರಪರಧಿಗಳೇ
ಅವರವರ ಭಾವ
ನಮ್ಮೊಳಗೊಬ್ಬರೆಂದು
ಅನುಭವಿಸಿದಂತೆ

Comments

Popular posts from this blog

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

ಇಬ್ಬನಿ

ಮುಂಜಾವಿನ ತೆಕ್ಕೆಯೊಳು  ಹಸಿರುಟ್ಟ ಭೂರಮೆಯ  ಒಡಲಲ್ಲಿ  ಹನಿಯುತಿವೆ ಹನಿಗಳು  ಸಾಲು ಸಾಲಾಗಿ...  ಮರ-ಗಿಡಗಳ ಎಲೆಗಳ ಮೇಲೆ ದೃಶ್ಯವಾಗುತ್ತವೆ  ದಣಿದ-ಮಣಿದ ಮೈ-ಮನಕ್ಕೆ  ಜೀವ ತುಂಬುತ್ತವೆ ಪನ್ನೀರ ಪಸರುತ್ತಾ... ಅಲ್ಪಾಯುಷಿಯಾದರು  ದೀಪದ ಬುಡ್ಡಿಯಂತೆ ಉದಾರ ಗುಣ  ಚಳಿಯನ್ನೂ ಲೆಕ್ಕಿಸದೇ  ಅವಿರತ ದುಡಿಮೆ... ಬೆಳಕಿನ ಪರದೆ ಸರಿದಂತೆ  ಮತ್ತಷ್ಟು ಮೆರುಗು ಕ್ಷಣಮಾತ್ರದಲ್ಲಿ  ಜೀವದ ಹಂಗು ತೊರೆದು  ಮಂಗ ಮಾಯ... ತನ್ನ ಶಾಂತ ಚಿತ್ತ ಸೌಮ್ಯ ಸ್ವಭಾವ  ಮತ್ತೆ ಹುಟ್ಟಲು ಕಾರಣ ಇಬ್ಬನಿ ಇರಿಯುವುದಿಲ್ಲ ಇಹ-ಪರರ ... ದೀವಟಿಗೆ by Sandeep Phadke is licensed under a Creative Commons Attribution-NonCommercial-NoDerivs 2.5 India License .

ಜಾತಿರಾಜಕಾರಣ ಯಾಕೆ ಬೇಕು..?

      ನ ಮ್ಮದು ಜ್ಯಾತ್ಯಾತೀತ ದೇಶ.ಹೀಗೆಂದು ಹೇಳಿಕೊಳ್ಳುವವರಿಗೆ ಲೆಕ್ಕವಿಲ್ಲ.ಆದರೂ,ಅನೇಕ ರೀತಿ-ರಿವಾಜು,ಜಾತಿ-ಧರ್ಮಗಳನ್ನು ಹೊಂದಿರುವ ದೇಶದಲ್ಲಿ ಸಾಮರಸ್ಯ ಕಾಣಬೇಕಾದರೆ ಜ್ಯಾತ್ಯಾತೀತತೆಯ ಕಡೆ ಒಲವು ಮೂಡಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ.ಸರಳ ನಡೆ-ನುಡಿ,ತಾತ್ವಿಕ ವಿಚಾರಗಳ ಕುರಿತ ಚರ್ಚೆ,ಸಹೋದರತೆಯನ್ನು ಸಾರುವ ಗುಣಗಳನ್ನು ಬೆಳೆಸಿಕೊಳ್ಳುವ ರೂಢಿ ಮಾಡಿಕೊಳ್ಳಬೇಕಿದೆ.ಜನರ ನಡುವೆ ಒಮ್ಮತದ ನಿರ್ಧಾರ ಕೈಗೊಳ್ಳಲು ಪ್ರಯತ್ನಗಳು ಸಾಗಬೇಕಿವೆ.ದಿನೇ-ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಲ್ಲಿ ಕೆಲವೊಂದು ಜಾತಿ-ಧರ್ಮಕ್ಕೆ ಸೇರಿದವರ ಸಂಖ್ಯೆ ಜಾಸ್ತಿಯಿರಬಹುದು.ಇದರಿಂದ ಸಾಮಾಜಿಕ ಬದಲಾವಣೆಗಳು ಸಾಧ್ಯ.ಹೀಗಾಗಿ ಸಮತೋಲನ ಕಾಯ್ದುಕೊಳ್ಳುವ ಜವಾಬ್ದಾರಿ ಮತ್ತೆ ಜನರದೇ ಆಗಿರುತ್ತದೆ.ಆದರೆ ಇದೆಲ್ಲಕ್ಕೂ ಸಂವಿಧಾನತ್ಮಕ ರೂಪು-ರೇಷೆಗಳಿರುತ್ತವೆ.ಮತದಾನದ ಮೂಲಕ ಆಯ್ಕೆಯಾಗಿರುವ ವ್ಯಕ್ತಿ ಊರಿನ ಪ್ರತಿನಿಧಿಯಾಗಿರುತ್ತಾನೆ.ರಾಜಕೀಯ ಪಕ್ಷಗಳು ಮೊದಲ ಹಂತದಲ್ಲಿ ಜನರನ್ನು ವಿಭಾಗಿಸಿಬಿಡುತ್ತದೆ.ಇಲ್ಲಿ ನಡೆಯುವ ಎಲ್ಲಾ ಲೆಕ್ಕಾಚಾರಗಳು ಜನರ ಹಿತದೃಷ್ಠಿಯಿಂದ ಎಂಬ ಮುಖವಾಡ ಹೊತ್ತಿರುತ್ತದೆಯಲ್ಲದೆ ಅಸಲಿ ಅಂಶ ಬೇರೆಯದೇ ಆಗಿರುತ್ತದೆ.          ರಾಜಕೀಯಕ್ಕೂ ಜಾತಿ-ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ.ಆದರೆ ಇಂದು ನಡೆಯುತ್ತಿರುವುದೆಲ್ಲ ಜಾತಿ ರಾಜಕಾರಣವೆ.ಇದರ ಬೇರು ವಿಶಾಲವಾಗಿ ಹರಡಿ ನಿಂತಿದೆ.ಮತದಾರರನ್ನು ವಿ...