Skip to main content

೨ಜಿ ಅವಾಂತರ



    ೨ಜಿ ತರಂಗಾಂತರ ವಿತರಣೆಯಲ್ಲಿ ನಡೆದಿರುವ ಹಗರಣ ಭಾರತ ಕಂಡ ಅತೀ ದೊಡ್ಡ ಪ್ರಕರಣಗಳಲ್ಲೊಂದು.ಈವರೆಗೆ ದೇಶದ ಇತಿಹಾಸದಲ್ಲಿ ನಡೆದಿರುವ ಎಲ್ಲಾ ಹಗರಣಗಳನ್ನು ಹಿಮ್ಮೆಟ್ಟಿದೆ.ಯುಪಿಎ ಸರ್ಕಾರಕ್ಕೆ ಮತ್ತೊಂದು ಕಳಂಕ ತಟ್ಟಿಂದಂತಾಗಿದೆ.ಪ್ರತಿಪಕ್ಷಗಳು ಇದನ್ನೇ ಚುನಾವಣೆಯ ದಾಳವನ್ನಾಗಿಸಿಕೊಳ್ಳಲು ತುದಿಗಾಲಲ್ಲಿ ನಿಂತಿವೆ.ಬಿಜೆಪಿ ಸೇರಿದಂತೆ ಹಲವು ಪಕ್ಷಗಳು ಜೆಪಿಸಿ (Joint Parliamentory Committee)ಯ ರಚನೆಗೆ ಒತ್ತಾಯಿಸಿಯಾಯಿತು.ಈ ಮಧ್ಯೆ ಸರ್ಕಾರ ಪಿಎಸಿ (Public Accounts Committee) ಗೆ ಹಗರಣದ ಕುರಿತು ತನಿಖೆ ನಡೆಸಲು ಸೂಚಿಸಿತು.ಇಷ್ಟೇಯಲ್ಲದೆ ಸಿಎಜಿ (Comptroller and Audit General of India) ಸಲ್ಲಿಸಿದ ವರದಿ ಪ್ರಕಾರ ಸುಮರು ೧.೭೬ ಲಕ್ಷ ಕೋಟಿ ರುಪಾಯಿಗಳ ಭಾರೀ ನಷ್ಟದ ಲೆಕ್ಕ ನಿಬ್ಬೆರಗಾಗುವಂತೆ ಮಾಡಿತು.ಬಿಜೆಪಿ ಮತ್ತು ಎನ್ ಡಿ ಎ ಯ ಮಿತ್ರ ಪಕ್ಷಗಳಾದ ಎಐಎಡಿಎಂಕೆ  ,ಸಮಾಜವಾದಿ ಪಾರ್ಟಿ,ಬಿಜೆಡಿಗಳು ಸ್ವತಂತ್ರ ಭಾರತದ ದೊಡ್ಡ ಹಗರಣವೆಂದು ಸಾಬೀತು ಮಾಡಲು ಮುಂದಾದವು.ದೂರ ಸಂಪರ್ಕ ಸಚಿವರಾಗಿದ ಎ.ರಾಜಾ ಜೈಲು ಸೇರಿದ್ದು ಮತ್ತಷ್ಟು ಕುತೂಹಲ ಕೆರಳಿಸಿತು.ಮಾಧ್ಯಮಗಳಲ್ಲಿ ಹಠಾತ್ ಬೆಳವಣಿಗೆಯ ಸುದ್ದಿ ಬಿತ್ತರವಾಗಲು ಶುರುವಾಯಿತು.ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ನಡೆದ ದೋಷ ಯುಪಿಎ ಸರ್ಕಾರವನ್ನೆ ಅಲುಗಾಡುವಂತೆ ಮಾಡಿತು.ವಿಚಾರಣೆ ನಡೆಯುತ್ತಿದ್ದಂತೆ ಹಿಂದಿನ ವಿತ್ತ ಸಚಿವ ಪಿ.ಚಿದಂಬರಂ, ಕನ್ನಿಮೋಳಿ ಮತ್ತು ಹಿಂದಿನ ಗೃಹ ಸಚಿವ ಪ್ರಣಬ್ ಮುಖರ್ಜೀ ಹೆಸರು ಕೇಳಲು ಶುರುವಾಯಿತು.
ಸ್ವಾನೆ ಟೆಲಿಕಾಂ,ಯುನಿಟೆಕ್ ವಯರ್ ಲೆಸ್ ಮತ್ತು ಲೂಪ್ ಟೆಲಿಕಾಂಗಳಂತಹ ಟೆಲಿಕಾಂ ಕ್ಷೇತ್ರದಲ್ಲಿ ಪರಿಚಿತವಲ್ಲದ ಕಂಪನಿಗಳಿಗೆ ೨೦೦೮ರಲ್ಲಿ ತರಂಗಾಂತರಗಳನ್ನು ೨೦೦೧ರಲ್ಲಿನ ದರದಲ್ಲಿ ವಿತರಿಸಿದ್ದು ಚರ್ಚೆಗೆ ಗ್ರಾಸವಾಯಿತು.ಈ ಸಂಬಂಧ ಯಾವುದೇ ಹರಾಜು ಪ್ರಕ್ರಿಯೆ ನಡಿದಿರಲಿಲ್ಲ. ಮಾಹಿತಿಗಳ ಪ್ರಕಾರ Telecom Regulatory Authority of India (TRAI)  ಮತ್ತು ಇತರೆ ಸಚಿವಾಲಯಗಳ ಅಭಿಪ್ರಾಯವನ್ನು ಪರಿಗಣಿಸದೇ ಈ ಸಂಸ್ಥೆಗಳಿಗೆ ಹಕ್ಕುಗಳನ್ನು ನೀಡಲಾಗಿತ್ತು.ಪ್ರಥಮ ಆದ್ಯತೆಯ ಮೇರೆಗೆ ಹಂಚಿದ ತರಂಗಾತರಗಳನ್ನು ವಿದೇಶಿ ಕಂಪನಿಗಳಿಗೆ ಹೆಚ್ಚಿನ ಮೊತ್ತಕ್ಕೆ ಮಾರಾಟ ಮಾಡಿ ಹಣಗಳಿಸಿಕೊಂಡಿದ್ದು ಈಗ ಇತಿಹಾಸ.ಈ ಹಗರಣದಿಂದಾಗಿ ಕೆಲವರು ಜೈಲು ಸೇರಿದ್ದು ತನಿಖೆ ಪೂರಕ ವರದಿ ಕೊಟ್ಟಲ್ಲಿ ಇನ್ನಷ್ಟು ನಿಜಾಂಶ ಹೊರಬರಬಹುದು.

Comments

Popular posts from this blog

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

ಜಾತಿರಾಜಕಾರಣ ಯಾಕೆ ಬೇಕು..?

      ನ ಮ್ಮದು ಜ್ಯಾತ್ಯಾತೀತ ದೇಶ.ಹೀಗೆಂದು ಹೇಳಿಕೊಳ್ಳುವವರಿಗೆ ಲೆಕ್ಕವಿಲ್ಲ.ಆದರೂ,ಅನೇಕ ರೀತಿ-ರಿವಾಜು,ಜಾತಿ-ಧರ್ಮಗಳನ್ನು ಹೊಂದಿರುವ ದೇಶದಲ್ಲಿ ಸಾಮರಸ್ಯ ಕಾಣಬೇಕಾದರೆ ಜ್ಯಾತ್ಯಾತೀತತೆಯ ಕಡೆ ಒಲವು ಮೂಡಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ.ಸರಳ ನಡೆ-ನುಡಿ,ತಾತ್ವಿಕ ವಿಚಾರಗಳ ಕುರಿತ ಚರ್ಚೆ,ಸಹೋದರತೆಯನ್ನು ಸಾರುವ ಗುಣಗಳನ್ನು ಬೆಳೆಸಿಕೊಳ್ಳುವ ರೂಢಿ ಮಾಡಿಕೊಳ್ಳಬೇಕಿದೆ.ಜನರ ನಡುವೆ ಒಮ್ಮತದ ನಿರ್ಧಾರ ಕೈಗೊಳ್ಳಲು ಪ್ರಯತ್ನಗಳು ಸಾಗಬೇಕಿವೆ.ದಿನೇ-ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಲ್ಲಿ ಕೆಲವೊಂದು ಜಾತಿ-ಧರ್ಮಕ್ಕೆ ಸೇರಿದವರ ಸಂಖ್ಯೆ ಜಾಸ್ತಿಯಿರಬಹುದು.ಇದರಿಂದ ಸಾಮಾಜಿಕ ಬದಲಾವಣೆಗಳು ಸಾಧ್ಯ.ಹೀಗಾಗಿ ಸಮತೋಲನ ಕಾಯ್ದುಕೊಳ್ಳುವ ಜವಾಬ್ದಾರಿ ಮತ್ತೆ ಜನರದೇ ಆಗಿರುತ್ತದೆ.ಆದರೆ ಇದೆಲ್ಲಕ್ಕೂ ಸಂವಿಧಾನತ್ಮಕ ರೂಪು-ರೇಷೆಗಳಿರುತ್ತವೆ.ಮತದಾನದ ಮೂಲಕ ಆಯ್ಕೆಯಾಗಿರುವ ವ್ಯಕ್ತಿ ಊರಿನ ಪ್ರತಿನಿಧಿಯಾಗಿರುತ್ತಾನೆ.ರಾಜಕೀಯ ಪಕ್ಷಗಳು ಮೊದಲ ಹಂತದಲ್ಲಿ ಜನರನ್ನು ವಿಭಾಗಿಸಿಬಿಡುತ್ತದೆ.ಇಲ್ಲಿ ನಡೆಯುವ ಎಲ್ಲಾ ಲೆಕ್ಕಾಚಾರಗಳು ಜನರ ಹಿತದೃಷ್ಠಿಯಿಂದ ಎಂಬ ಮುಖವಾಡ ಹೊತ್ತಿರುತ್ತದೆಯಲ್ಲದೆ ಅಸಲಿ ಅಂಶ ಬೇರೆಯದೇ ಆಗಿರುತ್ತದೆ.          ರಾಜಕೀಯಕ್ಕೂ ಜಾತಿ-ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ.ಆದರೆ ಇಂದು ನಡೆಯುತ್ತಿರುವುದೆಲ್ಲ ಜಾತಿ ರಾಜಕಾರಣವೆ.ಇದರ ಬೇರು ವಿಶಾಲವಾಗಿ ಹರಡಿ ನಿಂತಿದೆ.ಮತದಾರರನ್ನು ವಿ...

-: ಮುತ್ತಿನ ಹನಿಗಳು :-

------೧------ ಚುಂ- ಬನಕ್ಕೆ ಲಗ್ಗೆಯಿಡುವ ಯುವ ಜೋಡಿಗಳು ಅದೆಂತಹ ಪ್ರಕೃತಿ ಆರಾಧಕರು..! ------೨------ ಹೂದೋಟದಲ್ಲಿ ಕಾಣದ ಪತಂಗಗಳು ಯಥೇಚ್ಛ ಮಧು ಸವಿಯಲು ಯುವತಿಯರ ಹಿಂದೆ ಬಿದ್ದಿವೆಯಂತೆ..!