Skip to main content

ಸಮಾಜಕ್ಕೆ ಒಗ್ಗದ ತಾಣಗಳೇ..?


ಮಾಜದ ಹಿತದೃಷ್ಟಿಯಿಂದ ಜನಾಭಿಪ್ರಾಯ ಸಂಗ್ರಹಿಸುವುದು ಸಾಮಾನ್ಯ. ಪರ-ವಿರೋಧಗಳ ತುಲನೆ ಮಾಡಿ ಅಂತಿಮ ನಿರ್ಣಾಯ ಕೈಗೊಳ್ಳಲಾಗುತ್ತದೆ. ಇತ್ತೀಚೆಗೆ ಸಾಮಾಜಿಕ ತಾಣಗಳು ಅತಿರೇಕದ ಜನಾಭಿಪ್ರಾಯ ಒಟ್ಟುಗೂಡಿಸಲು ಮಾಧ್ಯಮಗಳಾಗುತ್ತಿವೆ. ವೈಯುಕ್ತಿಕ ದಿನಚರಿಯನ್ನೇ ‘ಗೋಡೆ’ ಬರಹವಾಗಿಸಿ ಸ್ನೇಹಿತರ ಪ್ರತಿಕ್ರಿಯೆಗೆ ದಿನವಿಡೀ ಹಪ-ಹಪಿಸುವವರಿದ್ದಾರೆ. ಕೆಲವು ಜಾತಿ-ಧರ್ಮ-ವ್ಯಕ್ತಿಗಳನ್ನು ಹಂಗಿಸುವ, ಛೇಡಿಸುವ ‘ಬೇನಾಮಿ’ಗಳ ಚಟುವಟಿಕೆ ಅಂಕೆಯಿಲ್ಲದ್ದಾಗಿದೆ. ಅವಹೇಳನ, ಪ್ರಚೋದನಕಾರಿ ಪ್ರತಿಕ್ರಿಯೆಗಳು ಭಾವೈಕ್ಯತೆಯನ್ನು ನುಂಗಿಹಾಕುತ್ತಿವೆ. ಇದೆಲ್ಲದರ ಬಗ್ಗೆ ಪ್ರಶ್ನೆ ಮಾಡಲೇಬೇಕೆನ್ನಿಸುವುದು ಸಹಜ.ಕಾಂಗ್ರೆಸ್ ನಾಯಕಿ ಸೋನಿಯಾ ವಿರುದ್ಧ ಫೇಸ್ ಬುಕ್ ನಲ್ಲಿದ್ದ ಮಾಹಿತಿ ಕೇಂದ್ರ ಸಚಿವ ಕಪಿಲ್ ಸಿಬಲ್ ರನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿತು. ವಿಪಕ್ಷಗಳಿಂದ ಲೇವಡಿಗೊಳಗಾದರು. ಅದೇನೇ ಇರಲಿ, ಒಂದು ವಿಷಯ ಚರ್ಚೆಯಾಗಬೇಕಾದರೆ ಕಾರಣಗಳು ಬೇಕು ಎಂದು ಮನವರಿಕೆ ಮಾಡಿಕೊಳ್ಳುವುದು ಉತ್ತಮ. ಬಹುಶಃ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಪೂರ್ಣ ಪ್ರಮಾಣದಲ್ಲಿ ಉಪಯೋಗಿಸಿಕೊಂಡಿರುವ ಸಾಮಾಜಿಕ ತಾಣಗಳು ನಿರಂಕುಶ ಪ್ರಭುತ್ವ ಹೊಂದಿವೆ ಎಂದರೆ ತಪ್ಪಾಗಲಾರದು. ಆದರೆ ಇದೀಗ ವಿವಿಧ ಜಾತಿ-ಧರ್ಮ-ಪಂಗಡಗಳು ಇಲ್ಲಿ ನಡೆಯುವ ಧರ್ಮ ವಿರೋಧಕ್ಕೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆಕ್ಷೇಪಾರ್ಹ, ನಿಂದನಾತ್ಮಕ ಅಂಶಗಳನ್ನು ತೆಗೆದು ಹಾಕಲು ಫೆಬ್ರವರಿ ಐದರ ಗಡುವು ನೀಡಿದೆ.

ಪಾಶ್ಚಾತ್ಯ ದೇಶಗಳಂತೆ, ನಮ್ಮಲ್ಲೂ ಅಭಿವ್ಯಕ್ತಿ ಅಸ್ತ್ರವಾಗಿ ರೂಪ ತಳೆದಿರುವುದು ಸ್ತುತ್ಯವೇ. ಬೇಕು-ಬೇಡಗಳ ಕುರಿತು ಅಭಿಪ್ರಾಯ ಹಂಚಿಕೊಳ್ಳಲು ಸುಲಭೋಪಾಯ.ಗೆಳೆಯರ ಬಳಗ ಕಟ್ಟಿಕೊಳ್ಳುವುದಲ್ಲದೇ, ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಚರ್ಚಿಸಲು, ಹೊಸ ಉತ್ಪನ್ನಗಳ ಜಾಹೀರಾತುಗಳಿಗೂ ಫೇಸ್ ಬುಕ್, ಟ್ವಿಟರ್, ಗೂಗಲ್+ ಮೊದಲಾದ ಸಾಮಾಜಿಕ ತಾಣಗಳನ್ನು ಬಳಸಲಾಗುತ್ತದೆ.ಹೀಗಿರುವಾಗ ಈ ತಾಣಗಳು ಕಳಂಕಿತವಾಗಲು ಸಾಧ್ಯವೇ? ಅಣ್ಣಾ ಹಜಾರೆಯವರ ಭ್ರಷ್ಟಾಚಾರ ವಿರೋಧಿ ಆಂದೋಲನದ ಸಂದರ್ಭದಲ್ಲಿ ಸಾಮಾಜಿಕ ತಾಣಗಳನ್ನು ಮುಖ್ಯ ವಾಹಿನಿಯಂತೆ ಬಳಸಿಕೊಳ್ಳಲಾಗಿದೆ. ಲಕ್ಷಾಂತರ ಜನರ ‘ಬೆಂಬಲ’ ಅಖಾಡಕ್ಕಿಳಿಯುವ ಮಂದಿಗೆ ನೈತಿಕ ಸ್ಧೈರ್ಯ ತುಂಬಿದೆ ಎನ್ನಬಹುದು. ಒಟ್ಟಾರೆಯಾಗಿ ಹಾಸು-ಹೊಕ್ಕಾಗಿ ಹರಡಿರುವ ಈ ತಾಣಗಳ ಶಕ್ತಿ ಪ್ರದರ್ಶನವಾದಂತಿತ್ತು.

           ಆಹಾರ ಬೇರೆ, ವ್ಯವಹಾರ ಬೇರೆ. ಇಂತಹ ಸಾಮಾಜಿಕ ತಾಣಗಳು ಜನರ ಭಾವನೆಗಳನ್ನು ಸರಕಾಗಿಸಿ ವ್ಯವಹರಿಸುತ್ತಿವೆಯೇ ಹೊರತು ಮತ್ತೇನೂ ಅಲ್ಲ. ನಮ್ಮಲ್ಲಿ ನಿರ್ಣಯ ಕೈಗೊಳ್ಳುವ ಮತ್ತು ಜನಾಭಿಪ್ರಾಯ ಸಂಗ್ರಹಿಸುವಲ್ಲಿನ ಹುರುಪು ಕಾರ್ಯಗತಗೊಳಿಸುವಲ್ಲಿ ಇಲ್ಲ. ಹಾಗಾಗಿಯೇ ಈ ತಾಣಗಳನ್ನು ಬೇಕಾಬಿಟ್ಟಿಯಾಗಿ ಬಳಸಿಕೊಳ್ಳಲಾಗುತ್ತಿದೆ. ಕೇವಲ ಅವರಿವರು ಏನು ಹೇಳುತ್ತಾರೆಂದು ತಿಳಿಯುವುದರಿಂದ ಯಾವ ಪ್ರಯೋಜನವೂ ಇಲ್ಲ. ಫೇಸ್ ಬುಕ್, ಟ್ವಿಟರ್ ಗಳ ಚಟುವಟಿಕೆಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸದೇ ಇರುವುದು, ವಾದಕ್ಕೆ ಪ್ರತಿವಾದವೆಂಬ ಧೋರಣೆ ಮತ್ತು ತಮ್ಮನ್ನೇ ತಾವು promote ಮಾಡಿಕೊಳ್ಳುವ ಚಾಳಿ ಕೆಲ ಸಂದರ್ಭದಲ್ಲಿ ಮಿತಿಮೀರಿದಾಗ ಪ್ರತಿಕೂಲ ವಾತಾವರಣ ಏರ್ಪಡುವಂತೆ ಮಾಡುತ್ತದೆ.ಎಲ್ಲರಿಗೂ ಮುಕ್ತವಾಗಿರುವ ಈ ತಾಣಗಳಲ್ಲಿ ಸಂಕೀರ್ಣ ವಿಚಾರಗಳನ್ನು ಚರ್ಚಿಸುವಾಗ ಗಾಳಿಯಲ್ಲಿ ಗುಂಡು ಹಾರಿಸಿದಂತೆ ಅಭಿಪ್ರಾಯ ನೀಡುವುದರಲ್ಲಿ ಅರ್ಥವಿಲ್ಲ. ಅನ್ಯ ಮನಸ್ಕರಾಗಿ ಆಕ್ರೋಶಪಡುವುದು, ಸಾಂದರ್ಭಿಕ ನೆಲೆಯಲ್ಲಿ ಕೆಂಗಣ್ಣಿಗೆ ಗುರಿಯಾಗಬಹುದು. ಇಷ್ಟಕ್ಕೂ ಇಲ್ಲಿ ನಡೆಯುವ ಚರ್ಚೆಗಳ ವಿಷಯ ವ್ಯಾಪ್ತಿ ಕಿರಿದು.ತ್ವರಿತ ಸಂಪರ್ಕ, ವಿಚಾರ-ವಿಮರ್ಶೆ ಮತ್ತು ಅನಿಸಿಕೆಗಳಿಗೆ ವೇದಿಕೆಯಾಗಿರುವ ತಾಣಗಳಲ್ಲಿ ಪೂರ್ವಾಗ್ರಹ ಪೀಡಿತರಂತೆ ನಡೆದುಕೊಳ್ಳದೇ ಇದ್ದರೆ ಕಲಹಕ್ಕೆ ಆಸ್ಪದವೇ ಇರುವುದಿಲ್ಲ. ಅಭಿವ್ಯಕ್ತಿಯ ಹೆಸರಿನಲ್ಲಿ ಜನರಿಗೆ ಅವಕಾಶ ಕಲ್ಪಿಸಲಾಗಿದೆಯೇ ಹೊರತು, ಇದು ಊರಿನ ಪಂಚಾಯಿತಿ ಕಟ್ಟೆಯಾಗಲು ಅಥವಾ ದೇಶವನ್ನು ಪಲ್ಲಟಿಸುವ ಸೂತ್ರವಾಗಲು ಅಸಾಧ್ಯ.

          ಸಾಮಾಜಿಕ ತಾಣಗಳ ಕುರಿತು ಒಂದಷ್ಟು ಕುತೂಹಲವೂ, ವಿರೋಧವೂ ಇದೆ. ವ್ಯಕ್ತಿಯ ಚಾರಿತ್ರ್ಯ ತಿಳಿಯಲು ಇವುಗಳ ಬಳಕೆಯಾಗುತ್ತಿದೆ. ಗೌಪ್ಯತೆಯನ್ನು ಬದಿಗಿಟ್ಟು ನಡೆಯುವ ವ್ಯವಹಾರಗಳು ಕೆಲವರ ಪಾಲಿಗೆ ಮುಳುವಾಗಿದೆ. ಸಂಪ್ರದಾಯವಾದಿಗಳ ಪಾಲಿಗೆ ಅಸಹ್ಯವಾಗಿದೆ. Offlineನಲ್ಲಿದ್ದಾಗ ಕಾಡುವ ಒಂಟಿತನ ಮಿಥ್ಯ ಜೀವನದ (Virtual Life) ಕಡೆಗೆ ಕೊಂಡೊಯ್ಯತ್ತಿದೆ. ಇದರ ನಡುವೆ, ಫೇಸ್ ಬುಕ್ ‘Timeline’ ಎನ್ನುವ ಹೊಸ ಅವತಾರದೊಂದಿಗೆ ಜನ್ಮ ಜಾಲಾಡಲು ಅಣಿಯಾಗಿದೆ. ಆದರೆ ಇದೆಲ್ಲವನ್ನು ವಿರೋಧಿಸುವ ಮೊದಲು, ಈ ತಾಣಗಳು ಮಾಹಿತಿ ಕಣಜವಾಗಿರುವುದನ್ನು ಅಲ್ಲಗಳೆಯುವಂತಿಲ್ಲ. ಅಷ್ಟೇ ಅಲ್ಲದೆ, ಎಲ್ಲದಕ್ಕೂ ವಿನಾಯಿತಿ ನೀಡುವ ಅಂತರ್ಜಾಲವೆಂಬ ಸೂಕ್ಷ್ಮ ವ್ಯವಸ್ಥೆಯೇ ಕಗ್ಗಂಟಾಗಿರುವಾಗ ಸಾಮಾಜಿಕ ತಾಣಗಳ ಬಗೆಗೆ ವೃಥಾ ಹಳಿಯಬೇಕಷ್ಟೆ. ಲಂಗು-ಲಗಾಮಿಲ್ಲದಿರುವುದರಿಂದ ವೈಮನಸ್ಸುಗಳು ಉಂಟಾದರೂ ಮತ್ತೆ ಮತ್ತೆ ಬೊಟ್ಟು ಮಾಡಿ ತೋರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನೇ..!
                                               
                                                                  (ಕೃಪೆ:ವಿಜಯ ಕರ್ನಾಟಕ-29-12-2011)
Creative Commons License

Comments

Popular posts from this blog

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

ಜಾತಿರಾಜಕಾರಣ ಯಾಕೆ ಬೇಕು..?

      ನ ಮ್ಮದು ಜ್ಯಾತ್ಯಾತೀತ ದೇಶ.ಹೀಗೆಂದು ಹೇಳಿಕೊಳ್ಳುವವರಿಗೆ ಲೆಕ್ಕವಿಲ್ಲ.ಆದರೂ,ಅನೇಕ ರೀತಿ-ರಿವಾಜು,ಜಾತಿ-ಧರ್ಮಗಳನ್ನು ಹೊಂದಿರುವ ದೇಶದಲ್ಲಿ ಸಾಮರಸ್ಯ ಕಾಣಬೇಕಾದರೆ ಜ್ಯಾತ್ಯಾತೀತತೆಯ ಕಡೆ ಒಲವು ಮೂಡಿಸುವ ಪ್ರಯತ್ನ ಮಾಡುವ ಅನಿವಾರ್ಯತೆ ಇದೆ.ಸರಳ ನಡೆ-ನುಡಿ,ತಾತ್ವಿಕ ವಿಚಾರಗಳ ಕುರಿತ ಚರ್ಚೆ,ಸಹೋದರತೆಯನ್ನು ಸಾರುವ ಗುಣಗಳನ್ನು ಬೆಳೆಸಿಕೊಳ್ಳುವ ರೂಢಿ ಮಾಡಿಕೊಳ್ಳಬೇಕಿದೆ.ಜನರ ನಡುವೆ ಒಮ್ಮತದ ನಿರ್ಧಾರ ಕೈಗೊಳ್ಳಲು ಪ್ರಯತ್ನಗಳು ಸಾಗಬೇಕಿವೆ.ದಿನೇ-ದಿನೇ ಹೆಚ್ಚುತ್ತಿರುವ ಜನಸಂಖ್ಯೆಯಲ್ಲಿ ಕೆಲವೊಂದು ಜಾತಿ-ಧರ್ಮಕ್ಕೆ ಸೇರಿದವರ ಸಂಖ್ಯೆ ಜಾಸ್ತಿಯಿರಬಹುದು.ಇದರಿಂದ ಸಾಮಾಜಿಕ ಬದಲಾವಣೆಗಳು ಸಾಧ್ಯ.ಹೀಗಾಗಿ ಸಮತೋಲನ ಕಾಯ್ದುಕೊಳ್ಳುವ ಜವಾಬ್ದಾರಿ ಮತ್ತೆ ಜನರದೇ ಆಗಿರುತ್ತದೆ.ಆದರೆ ಇದೆಲ್ಲಕ್ಕೂ ಸಂವಿಧಾನತ್ಮಕ ರೂಪು-ರೇಷೆಗಳಿರುತ್ತವೆ.ಮತದಾನದ ಮೂಲಕ ಆಯ್ಕೆಯಾಗಿರುವ ವ್ಯಕ್ತಿ ಊರಿನ ಪ್ರತಿನಿಧಿಯಾಗಿರುತ್ತಾನೆ.ರಾಜಕೀಯ ಪಕ್ಷಗಳು ಮೊದಲ ಹಂತದಲ್ಲಿ ಜನರನ್ನು ವಿಭಾಗಿಸಿಬಿಡುತ್ತದೆ.ಇಲ್ಲಿ ನಡೆಯುವ ಎಲ್ಲಾ ಲೆಕ್ಕಾಚಾರಗಳು ಜನರ ಹಿತದೃಷ್ಠಿಯಿಂದ ಎಂಬ ಮುಖವಾಡ ಹೊತ್ತಿರುತ್ತದೆಯಲ್ಲದೆ ಅಸಲಿ ಅಂಶ ಬೇರೆಯದೇ ಆಗಿರುತ್ತದೆ.          ರಾಜಕೀಯಕ್ಕೂ ಜಾತಿ-ಧರ್ಮಕ್ಕೂ ಯಾವುದೇ ಸಂಬಂಧವಿಲ್ಲ.ಆದರೆ ಇಂದು ನಡೆಯುತ್ತಿರುವುದೆಲ್ಲ ಜಾತಿ ರಾಜಕಾರಣವೆ.ಇದರ ಬೇರು ವಿಶಾಲವಾಗಿ ಹರಡಿ ನಿಂತಿದೆ.ಮತದಾರರನ್ನು ವಿ...

-: ಮುತ್ತಿನ ಹನಿಗಳು :-

------೧------ ಚುಂ- ಬನಕ್ಕೆ ಲಗ್ಗೆಯಿಡುವ ಯುವ ಜೋಡಿಗಳು ಅದೆಂತಹ ಪ್ರಕೃತಿ ಆರಾಧಕರು..! ------೨------ ಹೂದೋಟದಲ್ಲಿ ಕಾಣದ ಪತಂಗಗಳು ಯಥೇಚ್ಛ ಮಧು ಸವಿಯಲು ಯುವತಿಯರ ಹಿಂದೆ ಬಿದ್ದಿವೆಯಂತೆ..!