ಸ ಮಾಜದ ನಾನಾ ಸ್ತರದ ಜನರ ಜೊತೆ ಒಡನಾಟ ಮತ್ತು ಬಾಂಧವ್ಯ ವೃದ್ಧಿಗೆ ಸಹಾಯವಾಗುವ ಆದರ್ಶ ಗುಣಗಳು ಪ್ರಕೃತಿದತ್ತವಾಗಿ ಸಿಗುವ ವಸ್ತುಗಳೇನೂ ಅಲ್ಲ. ಅಥವಾ ಹುಟ್ಟು ಗುಣವಾಗಿಯೂ ಬರುವಂಥದಲ್ಲ. ಈ ದೇಶದಲ್ಲಿ ಆದರ್ಶ ಪ್ರಾಯರಾಗಿ ಬಾಳಿ ಬದುಕಿದವರ ಸಂಖ್ಯೆಯೂ ತುಂಬಾ ದೊಡ್ಡದಿದೆ. ಆದರೆ ಪ್ರಸ್ತುತ, ಸತ್ಪ್ರಜೆಯಾಗಿ ಉಳಿಯುವುದು ಕಷ್ಟವಾಗುತ್ತಿದೆ. ಹದಗೆಟ್ಟ ಪ್ರಜಾಸತಾತ್ಮಕ ವ್ಯವಸ್ಥೆ, ಅರಾಜಕೀಯತೆ ಒಳ್ಳೆಯವರನ್ನೂ ಕತ್ತಲಿಗೆ ತಳ್ಳುತ್ತಿದೆ. ಸುಲಭ, ಸಸೂತ್ರ ಮತ್ತು ಪಾರದರ್ಶಕತೆ ಕಲ್ಪಿಸಲಿರುವ ವ್ಯವಸ್ಥೆಗಳು ವ್ಯಕ್ತಿ-ಅಭಿಪ್ರಾಯ-ಅಭಿರುಚಿಗೆ ಸಿಲುಕಿ ಕ್ಷೀಣವಾಗಿ ಹೋಗಿವೆ. ಒಟ್ಟು ಸಮಾಜವನ್ನು ಸರಿ ದಾರಿಯಲ್ಲಿ ಕೊಂಡೊಯ್ಯಬೇಕಾದವರೇ ಅಡ್ಡದಾರಿ ಹಿಡಿಯುತ್ತಿರುವುದು ದುರಂತ. ನಾವು ಭಾರತೀಯರೆಂದು ಭಾಷಣ ಬಿಗಿಯುವಾಗ ಎದೆ ತಟ್ಟಿ ಹೇಳಿ ಕೊಳ್ಳುತ್ತೇವೆಯಾದರೂ, ನಮ್ಮಲ್ಲಿ ಒಂದು ಕೀಳರಿಮೆ ಇದ್ದೇ ಇದೆ. ಸಮಯ ಪ್ರಜ್ಞೆ, ಕಾಲೆಳೆಯುವುದು, ಯಶಸ್ಸು ಮತ್ತು ಸಾಧನೆಗಳನ್ನು ಪ್ರೊತ್ಸಾಹಿಸದೇ ಇರುವಂತಹ ಅನೇಕ ನಡೆಗಳು ನಮ್ಮೊಳಗೆ ತಾನಾಗಿಯೇ ಬೆಳೆದು ಬಿಟ್ಟಿದೆ. ಈ ಕುರಿತಾದ ಚರ್ಚೆಗಳಲ್ಲೆಲ್ಲಾ ಅಂತಿಮವಾಗಿ ಶಿಕ್ಷಣದ ಕೊರತೆಯಿದೆ ಎಂಬ ನಿರ್ಧಾರಕ್ಕೆ ಬರಲಾಗುತ್ತದೆ. ಆದರೆ ನಾಗರಿಕ ಜೀವನ ನಡೆಸಲು ಶಿಕ್ಷಣದ ಜೊತೆಗೆ ಕಾನೂನು ಮತ್ತು ಸಾಮಾಜಿಕ ವ್ಯವಸ್ಥೆಗಳು ಸರಿಯಾದ ರೀತಿಯಲ್ಲಿ ಜಾರಿಗೆ ಬರಬೇಕಿದೆ. ನಿಜಕ್ಕೂ ಭಾರತದಲ್ಲಿ ಈ ಕುರಿತಾದ ಸಮಗ್ರ ವಿಮರ್ಶೆಯ ಅ...