Skip to main content

ನಿವೃತ್ತಿ ಕಡ್ಡಾಯಗೊಳಿಸಿ


           ನ ಸೇವೆ ಮಾಡಲು ರಾಜಕೀಯಕ್ಕೆ ಸೇರಲೇಬೇಕೆಂಬ ನಿಯಮವಿಲ್ಲ. ಆದರೂ ರಾಜಕಾರಣವನ್ನು ಒಂದು ವಾಹಿನಿಯ ರೀತಿ ಬಳಸಿಕೊಂಡಲ್ಲಿ ತಪ್ಪಿಲ್ಲ. ಆದರೆ ಇದಕ್ಕೊಂದು ನಿಗದಿತ ವಯೋಮಿತಿ ಸೂಚಿಸುವ ಅಗತ್ಯವಿದೆ. ಯುವ ಆಕಾಂಕ್ಷಿಗಳಿಗೆ ಯೋಗ್ಯತೆಯ ಮೇರೆಗೆ ಆದ್ಯತೆ ನೀಡಲು ಇದು ಸಹಕಾರಿ. ಚುನಾವಣೆಗೆ ಸ್ಪರ್ಧಿಸಲು ಕನಿಷ್ಠ ವಯೋಮಿತಿ ಇರುವಂತೆ, ಗರಿಷ್ಠ ಮಿತಿಯನ್ನು ಇಡಬಹುದಲ್ಲವೇ? ಇದರಿಂದ ಒಂದು ಸೇವೆಯಿಂದ ನಿವೃತ್ತರಾಗಿ, ಅಧಿಕಾರ-ಪ್ರಚಾರ ಗಿಟ್ಟಿಸಲು ರಾಜಕೀಯಕ್ಕೆ ಧುಮುಕುವವರ ಹಾವಳಿ ತಪ್ಪುತ್ತದೆ. ರಾಜಕೀಯದ ಘನತೆ ಕಾಪಾಡಿದಂತೆಯೂ ಆಗುತ್ತದೆ.


ಆಯುಷ್ಯ ಕಡಿಮೆಯಾದಂತೆ, ಆರೋಗ್ಯವೂ ಹದಗೆಡುತ್ತದೆ. ತನ್ನ ಕುಟುಂಬಕ್ಕಾಗಿ ಇನ್ನಷ್ಟು ಧನ-ಆಸ್ತಿ ಸಂಪಾದಿಸಬೇಕೆನ್ನುವ ಬಲವಾದ ಹಂಬಲವೂ ಉಂಟಾಗುತ್ತದೆ. ಹಾಗಾಗಿ ಇಂತಹ ಪರಿಸ್ಥಿಯಲ್ಲಿರುವವರು ಸರ್ವತೋಮುಖ ಪ್ರಗತಿಯ ಕಡೆ ಎಷ್ಟು ಗಮನ ಹರಿಸಲು ಸಾಧ್ಯ? ಆದ್ದರಿಂದ ರಾಜಕೀಯ ನಿವೃತ್ತಿಯ ವಯಸ್ಸನ್ನು 60 ರಿಂದ 65 ರೊಳಗೆ ಕಡ್ಡಾಯಗೊಳಿಸಿದರೆ ಸೂಕ್ತ. ನಿಯಮಿತ ಕಾಲಾವಧಿಯೊಳಗೆ ಸಕ್ರಿಯ ರಾಜಕಾರಣ ಮಾಡಿ, ಜನರಿಗೆ ಬೇಡವಾಗುವ ಮೊದಲು ಗೌರವದಿಂದ ಹೊರ ನಡೆಯುವುದು ಒಳಿತು. ಇತ್ತೀಚೆಗೆ, ಚುನಾವಣೆ ಸಂದರ್ಭಗಳಲ್ಲಿ ತಾನು ರಾಜಕೀಯ ನಿವೃತ್ತಿ ಘೋಷಿಸುತ್ತೇನೆಂದು ಬೊಂಬಡ ಬಾರಿಸಿ, ಜನರ ವಿಶ್ವಾಸಗಳಿಸುವ ತಂತ್ರಗಳು ನಡೆಯುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ, ರಾಜಕೀಯ ನಿವೃತ್ತಿಯನ್ನು  ಕಾರ್ಯರೂಪಕ್ಕೆ ತರುವಲ್ಲಿ ಸಂಬಂಧಪಟ್ಟವರು ಗಮನಹರಿಸಿದರೆ ಒಳಿತು.




Creative Commons License
ದೀವಟಿಗೆ by ಸಂದೀಪ ಫಡ್ಕೆ, ಮುಂಡಾಜೆ is licensed under a Creative Commons Attribution-NonCommercial-NoDerivs 2.5 India License

Comments

Popular posts from this blog

ಇಬ್ಬನಿ

ಮುಂಜಾವಿನ ತೆಕ್ಕೆಯೊಳು  ಹಸಿರುಟ್ಟ ಭೂರಮೆಯ  ಒಡಲಲ್ಲಿ  ಹನಿಯುತಿವೆ ಹನಿಗಳು  ಸಾಲು ಸಾಲಾಗಿ...  ಮರ-ಗಿಡಗಳ ಎಲೆಗಳ ಮೇಲೆ ದೃಶ್ಯವಾಗುತ್ತವೆ  ದಣಿದ-ಮಣಿದ ಮೈ-ಮನಕ್ಕೆ  ಜೀವ ತುಂಬುತ್ತವೆ ಪನ್ನೀರ ಪಸರುತ್ತಾ... ಅಲ್ಪಾಯುಷಿಯಾದರು  ದೀಪದ ಬುಡ್ಡಿಯಂತೆ ಉದಾರ ಗುಣ  ಚಳಿಯನ್ನೂ ಲೆಕ್ಕಿಸದೇ  ಅವಿರತ ದುಡಿಮೆ... ಬೆಳಕಿನ ಪರದೆ ಸರಿದಂತೆ  ಮತ್ತಷ್ಟು ಮೆರುಗು ಕ್ಷಣಮಾತ್ರದಲ್ಲಿ  ಜೀವದ ಹಂಗು ತೊರೆದು  ಮಂಗ ಮಾಯ... ತನ್ನ ಶಾಂತ ಚಿತ್ತ ಸೌಮ್ಯ ಸ್ವಭಾವ  ಮತ್ತೆ ಹುಟ್ಟಲು ಕಾರಣ ಇಬ್ಬನಿ ಇರಿಯುವುದಿಲ್ಲ ಇಹ-ಪರರ ... ದೀವಟಿಗೆ by Sandeep Phadke is licensed under a Creative Commons Attribution-NonCommercial-NoDerivs 2.5 India License .

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

-: ಮುತ್ತಿನ ಹನಿಗಳು :-

------೧------ ಚುಂ- ಬನಕ್ಕೆ ಲಗ್ಗೆಯಿಡುವ ಯುವ ಜೋಡಿಗಳು ಅದೆಂತಹ ಪ್ರಕೃತಿ ಆರಾಧಕರು..! ------೨------ ಹೂದೋಟದಲ್ಲಿ ಕಾಣದ ಪತಂಗಗಳು ಯಥೇಚ್ಛ ಮಧು ಸವಿಯಲು ಯುವತಿಯರ ಹಿಂದೆ ಬಿದ್ದಿವೆಯಂತೆ..!