Skip to main content

ಸೈಬರ್ ಕ್ರಾಂತಿ ಮಾರಕವೇ?




ಡಿಜಿಟಲ್ ತಂತ್ರಜ್ಞಾನವನ್ನು ಬಗಲಲ್ಲಿಟ್ಟುಕೊಂಡು ಇಲೆಕ್ಟ್ರಾನಿಕ್ ಮಾಧ್ಯಮ ಮತ್ತು ಸಾಮಾಜಿಕ ತಾಣಗಳು ವಿಶ್ವವನ್ನೇ ಅಂಗೈಯಲ್ಲಿ ತಂದು ಕೂರಿಸಿವೆ. ಎಲ್ಲ ಕ್ಷೇತ್ರಗಳ ವಿದ್ಯಮಾನ ಮತ್ತು ದೈನಂದಿನ ಬದುಕಿನ ಪುಟ-ಪುಟಗಳು ಮುಕ್ತವಾಗಿ ಹರಡಲು ಅನುವು ಮಾಡಿಕೊಟ್ಟಿದೆ. ಇಷ್ಟೇ ಅಲ್ಲದೇ, ವಿವಿಧ ಸಂಘಟನೆಗಳ ಪ್ರತಿಭಟನೆಗಳಿಗೆ ಕುಮ್ಮಕ್ಕು ನೀಡಲೂ ಇವು ಹಿಂಜರಿಯುವುದಿಲ್ಲ. ವಾಕ್ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಎಲ್ಲರ ಗಮನ ಸೆಳೆಯುವಂತೆ ಮಾಡುವ ಉದಾರ ಗುಣ ಸೈಬರ್ ಕ್ರಾಂತಿಯ ಬೆನ್ನೆಲುಬು. ವಿವಾದಾತ್ಮಕ ಹೇಳಿಕೆಗಳ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ಮಂದಿಗೆ ಹೇಳಿ ಮಾಡಿಸಿದಂತಿರುವ ಈ ಸಾಮಾಜಿಕ ತಾಣಗಳು, ಜನರ ನಡುವೆ ಪ್ರಭಾವೀ ಮಾಧ್ಯಮವಾಗಿ ಬೆಳೆದು ನಿಂತಿದೆ.


ಸಾಮಾಜಿಕ ಮತ್ತು ರಾಜಕೀಯ ಬದಲಾವಣೆ ತರುವಲ್ಲಿ ಇಂತಹ ಡಿಜಿಟಲ್ ಆಂದೋಲನಗಳು ಎಷ್ಟರ ಮಟ್ಟಿಗೆ ಸಹಕಾರಿಯಾಗುತ್ತಿದೆ ಎಂಬುದು ಯಕ್ಷ ಪ್ರಶ್ನೆ. ಆದರೆ ಜನರ ಮುಂದೆ ಹೊಸ ರೀತಿಯಲ್ಲಿ ಬೇಡಿಕೆ, ಅಹವಾಲುಗಳನ್ನು ಮುಂದಿಡಲು ಇದೊಂದು ಸೂಕ್ತ ವೇದಿಕೆಯಾಗಿ ಮಾರ್ಪಡುತ್ತಿದೆ. ಫೇಸ್ ಬುಕ್, ಟ್ವಿಟರ್ ಮೊದಲಾದೆಡೆ ಇದಕ್ಕಾಗಿಯೇ ನಾಯಿಕೊಡೆಯಂತೆ ಖಾತೆಗಳು ದೃಶ್ಯವಾಗುತ್ತವೆ. ಕಡಿಮೆ ವೆಚ್ಚದಲ್ಲಿ, ಎಲ್ಲಿ-ಯಾವಾಗ ಬೇಕಾದರೂ ಅಭಿಪ್ರಾಯ ಹಂಚಿಕೊಳ್ಳಬಹುದಾದರೂ, ಮೇಲ್ನೋಟಕ್ಕೆ ನಾಟಕೀಯವಾಗಿ ಕಾಣದೇ ಇರದು. ಹಿಂದಿನ ಪತ್ರ ವ್ಯವಹಾರದಲ್ಲಿದ್ದ ಕೌತುಕತೆ ಮಿಂಚಂಚೆಯಲ್ಲಿ ಕಾಣುವುದು ಅಸಾಧ್ಯ. ಹಾಗೆಯೇ ಈ ಸೈಬರ್ ಕ್ರಾಂತಿ ಕೂಡ. ಮುಖಂಡರ ಹೆಸರಿನಲ್ಲಿ ಯಾರೋ ನಿರ್ವಹಿಸುವ ಆಂದೋಲನಗಳು ಎಷ್ಟೋ ಸಾರಿ ಜನರಿಗೆ ತಪ್ಪು ಮಾಹಿತಿ ನೀಡುವುದೂ ಉಂಟು. ಇಲ್ಲಿ ನಡೆಯುವ ಚಟುವಟಿಕೆಗಳಿಗೆ ಮನ್ನಣೆ ದೊರೆಯುವ ಖಾತರಿಯೂ ಇಲ್ಲ. ಜನ ಮರುಳೋ, ಜಾತ್ರೆ ಮರುಳೋ ಎಂಬಂತೆ ನಮ್ಮಲ್ಲೂ ಚುನಾವಣೆ ಸಮೀಪಿಸುತ್ತಿದ್ದಂತೆ ಅನೇಕ ರಾಜಕೀಯ ನಾಯಕರ ಖಾತೆಗಳು ಸಾಮಾಜಿಕ ಜಾಲತಾಣಗಳಲ್ಲಿ ತೆರೆದುಕೊಂಡವು. ತಮಾಷೆಯೆಂದರೆ ಕೆಲವರಿಗೆ ಅದರ ಬಳಕೆ ಹೇಗೆಂಬುದೇ ಗೊತ್ತಿರಲಿಲ್ಲ. ಕಾಲ ಬದಲಾಗಿದೆ. ಇಂತಹ ಸಾಮಾಜಿಕ ತಾಣಗಳಲ್ಲಿ ಜನರು ಹೆಚ್ಚು ತೊಡಗಿಸಿಕೊಳ್ಳುವುದರಿಂದ, ತಮ್ಮ ಇರುವಿಕೆಯನ್ನು ಗುರುತಿಸಿಕೊಳ್ಳಲು  ಅವರಿಗೆ ಅನಿವಾರ್ಯ ಮಾರ್ಗವಾಗಿತ್ತೆಂದರೂ ತಪ್ಪಿಲ್ಲ. ಆದರೆ ಎಷ್ಟೋ ಸಾರಿ, ಸಣ್ಣ ಪ್ರಮಾದವೂ ಪೇಚಿಗೆ ಸಿಲುಕಿಸುತ್ತದೆ.
ಏಕಾಏಕಿ ಪರಿಸ್ಥಿತಿಯನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದೇ ಜನ ವಿರೋಧಿ ಹೇಳಿಕೆಗಳು ಜಾಲತಾಣಗಳ ಮುಖೇನ ಬಿತ್ತರವಾದಲ್ಲಿ, ಮತ್ತೊಂದು ಆಂದೋಲನಕ್ಕೆ ಎಡೆಮಾಡಿ ಕೊಟ್ಟೀತು. ವ್ಯಕ್ತಿ, ಸಂಘಟನೆಗಳ ಕುರಿತು ವಿನಾಕಾರಣ ಸೈಬರ್ ಕ್ರಾಂತಿ ನಡೆಸಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ಕಲ್ಪಿಸುವುದು ಸ್ವಾಸ್ಥ ಸಮಾಜದ ಲಕ್ಷಣವಲ್ಲ. ಸೈಬರ್ ಕ್ರಾಂತಿ ಅಡ್ಡ ಗೋಡೆಯ ಮೇಲೆ ದೀಪ ಇಟ್ಟಂತೆಯೇ ವಿನಹಃ ಮತ್ತೇನೂ ಅಲ್ಲ. ಇಲ್ಲಿ ಹಿತಶತ್ರುಗಳ ಜೊತೆ ಸೆಣಸಾಡಬೇಕಾಗುತ್ತದೆ. ಇಷ್ಟಕ್ಕೂ ಇದು ತಂತ್ರಜ್ಞಾನದ ತಪ್ಪಲ್ಲ. ತ್ವರಿತ ಸಂಪರ್ಕ, ಸಂವಹನ ಕಲ್ಪಿಸಲಿರುವ ಸೈಬರ್ ಇಂದು ಅಪರಾಧ, ಮಾನ ಹರಾಜು, ಅತಿರೇಕದ ನಡತೆಗಳಿಗೆ ಗುರಿಯಾಗಿದೆ.
·         

Comments

Anonymous said…
Yes, it is very dangerous. If you read the comments for all the articles in this blog, you will realise soon.

http://navakarnataka.blogspot.com/2013/12/aganitha-vismaya-of-rohith.html#comment-form

Popular posts from this blog

ಇಬ್ಬನಿ

ಮುಂಜಾವಿನ ತೆಕ್ಕೆಯೊಳು  ಹಸಿರುಟ್ಟ ಭೂರಮೆಯ  ಒಡಲಲ್ಲಿ  ಹನಿಯುತಿವೆ ಹನಿಗಳು  ಸಾಲು ಸಾಲಾಗಿ...  ಮರ-ಗಿಡಗಳ ಎಲೆಗಳ ಮೇಲೆ ದೃಶ್ಯವಾಗುತ್ತವೆ  ದಣಿದ-ಮಣಿದ ಮೈ-ಮನಕ್ಕೆ  ಜೀವ ತುಂಬುತ್ತವೆ ಪನ್ನೀರ ಪಸರುತ್ತಾ... ಅಲ್ಪಾಯುಷಿಯಾದರು  ದೀಪದ ಬುಡ್ಡಿಯಂತೆ ಉದಾರ ಗುಣ  ಚಳಿಯನ್ನೂ ಲೆಕ್ಕಿಸದೇ  ಅವಿರತ ದುಡಿಮೆ... ಬೆಳಕಿನ ಪರದೆ ಸರಿದಂತೆ  ಮತ್ತಷ್ಟು ಮೆರುಗು ಕ್ಷಣಮಾತ್ರದಲ್ಲಿ  ಜೀವದ ಹಂಗು ತೊರೆದು  ಮಂಗ ಮಾಯ... ತನ್ನ ಶಾಂತ ಚಿತ್ತ ಸೌಮ್ಯ ಸ್ವಭಾವ  ಮತ್ತೆ ಹುಟ್ಟಲು ಕಾರಣ ಇಬ್ಬನಿ ಇರಿಯುವುದಿಲ್ಲ ಇಹ-ಪರರ ... ದೀವಟಿಗೆ by Sandeep Phadke is licensed under a Creative Commons Attribution-NonCommercial-NoDerivs 2.5 India License .

ಯುವ ಜನತೆ ಮತ್ತು ಸಾಮಾಜಿಕ ತಾಣಗಳು

        ಸಂ ಪರ್ಕ ಮಾಧ್ಯಮಗಳು ಒಂದೆರಡಲ್ಲ,ಹಲವು ಬಗೆಯವು.ಅನಾದಿಕಾಲದಿಂದಲೂ ಇಂತಹ ಮಾಧ್ಯಮಗಳು ಜಾರಿಯಲ್ಲಿವೆ. ಕಾಲ ಬದಲಾದಂತೆ ಶೀಘ್ರ ಸಂಪರ್ಕ ಕಲ್ಪಿಸಬಹುದಾದ ಸಾಧನಗಳು ಬರಲಾರಂಭಿಸಿದವು.ಇಂದಿನ ಈ-ಮೇಲ್,ಸಾಮಾಜಿಕ ತಾಣಗಳು (ಫೇಸ್ ಬುಕ್,ಟ್ವಿಟ್ಟರ್..) ಪ್ರಚಲಿತ ಸಾಧನಗಳು.ಆದರೆ ಸಾಂಪ್ರದಾಯಿಕ ಪತ್ರ ವ್ಯವಹಾರಕ್ಕೆ ಇದ್ದ ಗೈರತ್ತು ಈ ಮಾಧ್ಯಮಗಳಲ್ಲಿ ಕಾಣುವುದು ಕಷ್ಟ.ಆದರೆ ಹೊಸತನಕ್ಕೆ ಅಂಟಿಕೊಳ್ಳುವ ಅನಿವಾರ್ಯತೆ ಬೇರೆಯದೇ ಪ್ರಪಂಚಕ್ಕೆ ಕರೆದೊಯ್ಯುತ್ತವೆ.ಎಲ್ಲೋ-ಎಂದೋ ಭೇಟಿಯಾದವರು, ಯಾವುದೋ ಊರಿನಲ್ಲಿರುವವರು ಹೀಗೆ ಹತ್ತು ಹಲವು ಕಾರಣಗಳಿಂದ ದೂರವಾದವರನ್ನು ಹತ್ತಿರಕ್ಕೆ,ಸದಾ ಸಂಪರ್ಕದಲ್ಲಿರುವಂತೆ ಮಾಡುವ ಛಾತಿ ಸಾಮಾಜಿಕ ತಾಣಗಳಂತಹ ಅಂತರ್ಜಾಲ ಸಂಬಂಧಿ ವ್ಯವಸ್ಥೆಗಳಿಗಿವೆ.ವಯಸ್ಸಿನ ಅಂತರವಿಲ್ಲದೇ ಎಲ್ಲರನ್ನು ಆಕರ್ಷಿಸುವ ತಾಣಗಳು ಮನೆ-ಮನಗಳಲ್ಲಿ ಹಸುರಾಗಿವೆ.ಇವುಗಳ ಬಳಕೆ ಹೆಚ್ಚಾಗುತ್ತಲೇ ಇದೆ.ಒಂದು ಘಳಿಗೆಯೂ ಬಿಟ್ಟು ಇರಲಾರದಷ್ಟು ಪ್ರಭಾವ ಬೀರಿವೆ.ಭಾರತ ಫೇಸ್ ಬುಕ್ ಬಳಕೆಯಲ್ಲಿ ವಿಶ್ವದಲ್ಲೇ ಮೂರನೇ ಸ್ಥಾನದಲ್ಲಿದೆ.        ಯುವ ಜನಾಂಗ ಈ ತಾಣಗಳ ಅತಿ ಹೆಚ್ಚು ಬಳಕೆ ಮಾಡುತ್ತಿರುವುದು ಗೊತ್ತಿರುವ ವಿಚಾರವೆ.ಗೆಳೆಯರ ಬಳಗ ಕಟ್ಟಿಕೊಳ್ಳುವ ಆಸಕ್ತಿ ಹೆಚ್ಚಿಸುತ್ತಿರುವ ಸಾಮಾಜಿಕ ತಾಣಗಳು ಓದಿನ ಮೇಲಿರಬೇಕಾದ ಗಮನ ಕುಂಠಿತಗೊಳಿಸುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರು...

-: ಮುತ್ತಿನ ಹನಿಗಳು :-

------೧------ ಚುಂ- ಬನಕ್ಕೆ ಲಗ್ಗೆಯಿಡುವ ಯುವ ಜೋಡಿಗಳು ಅದೆಂತಹ ಪ್ರಕೃತಿ ಆರಾಧಕರು..! ------೨------ ಹೂದೋಟದಲ್ಲಿ ಕಾಣದ ಪತಂಗಗಳು ಯಥೇಚ್ಛ ಮಧು ಸವಿಯಲು ಯುವತಿಯರ ಹಿಂದೆ ಬಿದ್ದಿವೆಯಂತೆ..!